ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಾಂತಾರ ಮೆಚ್ಚಿ ರಿಷಬ್ ಶೆಟ್ಟಿಯನ್ನು ಮನೆಗೆ ಕರೆದು ಸನ್ಮಾನಿಸಿದ ರಜನಿಕಾಂತ್
ರಜನಿಕಾಂತ್ ಕರೆ ಮಾಡಿ ಕೆಲ ದಿನಗಳಲ್ಲೇ ರಿಷಬ್ ಶೆಟ್ಟಿಯನ್ನು ತಮ್ಮ ಮನೆಗೆ ಕರೆಸಿ ಸನ್ಮಾನಿಸಿದ್ದಾರೆ. ಈ ವೇಳೆ ಕಾಂತಾರ ಸಿನಿಮಾ ಹಾಗೂ ಚಿತ್ರರಂಗದ ಕುರಿತು ಕೆಲ ಕಾಲ ರಿಷಬ್ ಶೆಟ್ಟಿ ಜೊತೆ ಮಾತುಕತೆ ನಡೆಸದ್ದಾರೆ. ಅಲ್ಲದೆ ರಿಷಬ್ ಶೆಟ್ಟಿಗೆ ರೇಷಿಮೆ ವಸ್ತ್ರ ಹೊದಿಸಿ ಸನ್ಮಾನಿಸಿದ್ದಾರೆ.
ರಜನಿಕಾಂತ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿ, ಆಶೀರ್ವಾದ ಪಡೆದಿದ್ದಾರೆ ರಿಷಬ್ ಶೆಟ್ಟಿ. ಈ ಫೋಟೋಗಳನ್ನು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದೆ. ಇವು ಸಿಕ್ಕಾಪಟ್ಟೆ ವೈರಲ್ ಆಗಿವೆ.
‘ಕಾಂತಾರ’ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಇಂದಿಗೂ ಹಲವು ಕಡೆಗಳಲ್ಲಿ ಈ ಚಿತ್ರ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಬೇರೆ ಭಾಷೆಗಳಿಗೂ ಡಬ್ ಆಗಿ ಸೂಪರ್ ಹಿಟ್ ಆಗಿದೆ. ನೂರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ.
