• February 10, 2026

Tags : bollywood

ಬಾಲಿವುಡ್ ಚಿತ್ರರಂಗಕ್ಕೆ ಕಾಲಿಟ್ಟ  ಮಂಗಳೂರ ಹುಡುಗಿ ಅಯ್ಯೋ ಶ್ರದ್ಧಾ

ತನ್ನ ಪಟ ಪಟ ಮಾತಿನಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿರುವ ಮಂಗಳೂರು ಚೆಲುವೆ ಅಯ್ಯಯ್ಯೋ ಶ್ರದ್ಧಾ ಇದೀಗ ಸಿನಿಮಾ ರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ.  ಬಾಲಿವುಡ್ ಸ್ಟಾರ್ ನಟನ ಜೊತೆ ಶ್ರದ್ಧಾಗೆ ನಟಿಸುವ ಚಾನ್ಸ್ ಸಿಕ್ಕಿದ್ದು ಡಾಕ್ಟರ್ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಬಾಲಿವುಡ್ ನಟ ಆಯುಷ್ಮಾನ್ ಖುರಾನ ಹಾಗೂ ರಾಕುಲ್ ಪ್ರೀತ್ ಸಿಂಗ್ ನಟನೆಯ ‘ಡಾಕ್ಟರ್ ಜಿ’ ಸಿನಿಮಾದಲ್ಲಿ ಅಯ್ಯೋ ಶ್ರದ್ಧಾ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಶ್ರದ್ಧಾ ಡಾಕ್ಟರ್ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದು ಈ ವಿಷಯವನ್ನು ಸ್ವತಃ ಶ್ರದ್ಧಾ ಇನ್ […]Read More

ಆರೋಗ್ಯ ಚೇತರಿಕೆಗೆ ಹೋರಾಡಿದ ನನ್ನ ಗಂಡ ನಿಜವಾದ ಹೋರಾಟಗಾರ: ರಾಜು ಶ್ರೀವಾತ್ಸವ್ ಪತ್ನಿ

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಿವುಡ್ ಖ್ಯಾತ ಕಾಮಿಡಿ ನಟ ರಾಜು ಶ್ರೀವತ್ಸವ್ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ವೈದ್ಯರು ರಾಜು ಅವರ ಆರೋಗ್ಯ ಚೇತರಿಕೆಗೆ ಸಾಕಷ್ಟು ಶ್ರಮ ಹಾಕಿದ್ದರು. ಆದರೆ ಏಕಾಏಕಿ ರಾಜು ಅವರಿಗೆ ಜ್ವರ ಕಾಣಿಸಿಕೊಂಡು ಕೊನೆಯುಸಿರೆಳೆದಿದ್ದಾರೆ. ಪತಿಯ ನಿಧನದ ಬಳಿಕ ಮಾಧ್ಯಮಗಳೊಂದಿ ಮಾತನಾಡಿದ ರಾಜು ಶ್ರೀವಾತ್ಸವ್ ಪತ್ನಿ ಶಿಖಾ, ಕೊನೆಯ ದಿನಗಳಲ್ಲಿ ಆರೋಗ್ಯ ಸುಧಾರಿಸಲು ಸಾಕಷ್ಟು ಹೋರಾಡಿದ್ದರು. 41 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಅವರ […]Read More

ಕೋಮಾದಲ್ಲಿದ್ದ ಖ್ಯಾತ ಹಾಸ್ಯ ನಟ ರಾಜು ಶ್ರೀವತ್ಸವ್ ನಿಧನ: ಕಂಬನಿ ಮಿಡಿದ ಚಿತ್ರರಂಗ

ಜಿಮ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಹಾಸ್ಯ ನಟ ರಾಜು ಶ್ರೀವತ್ಸವ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಕೋಮಾದಲ್ಲಿ ದ್ದ ರಾಜು ಶ್ರೀವತ್ಸವ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಆಗಸ್ಟ್ 10ರಂದು ರಾಜು ಶ್ರೀವತ್ಸವ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ದಿನದಿಂದಲೂ ರಾಜು ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ಶ್ರಮ ಹಾಕಿದ್ದರು. ಆದರೆ ಅವರು ಕೋಮದಿಂದ ಹೊರ ಬರಲೇ ಇಲ್ಲ. ವೈದ್ಯರು ತಮ್ಮೆಲ್ಲ ಪ್ರಯತ್ನಗಳನ್ನು ಮಾಡಿದರೂ, […]Read More

ಬಾಲಿವುಡ್ ಸ್ಟಾರ್ ನಟನೊಂದಿಗೆ ಗೂಗ್ಲಿ ಬೆಡಗಿ ಕೃತಿ ಕರಬಂಧ ಮದುವೆ

ಚಿರು ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಕೃತಿ ಕರಬಂಧ ಸದ್ಯ ಹಿಂದಿ ಹಾಗೂ ದಕ್ಷಿಣ ಭಾರತದ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳಲ್ಲಿ ಸದ್ದು ಮಾಡುತ್ತಿರುವಾಗ್ಲೆ ಕೃತಿ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಬಾಲಿವುಡ್ ಸ್ಟಾರ್ ನಟನ ಜೊತೆ ಗೂಗ್ಲಿ ಹುಡುಗಿ ಮದುವೆಯಾಗುತ್ತಿದ್ದಾರೆ. ಚಿರಂಜೀವಿ ಸರ್ಜಾ ನಟನೆಯ 2010ರಲ್ಲಿ ತೆರೆಕಂಡ ಚಿರು ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಕೃತಿ ಕರಬಂಧ ಬಳಿಕ ಪ್ರೇಮ್ ಅಡ್ಡ, ಸೂಪರ್ ರಂಗ, ಸೂಪರ್ ರಂಗ, ಗೂಗ್ಲಿ […]Read More

ಬಿಟೌನ್ ನಲ್ಲಿ ರಶ್ಮಿಕಾ ಮಂದಣ್ಣಗೆ ಸಖತ್ ಡಿಮ್ಯಾಂಡ್: ಸ್ಟಾರ್ ನಟನ ಸಿನಿಮಾದಲ್ಲಿ ‘ಕಿರಿಕ್

ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ ಮುಟ್ಟಿದೆಲ್ಲಾ ಚಿನ್ನವಾಗುತ್ತಿದೆ. ರಶ್ಮಿಕಾ ಕಾಲ್ ಶೀಟ್ ಗಾಗಿ ನಿರ್ಮಾಪಕರು ಕ್ಯೂ ನಿಂತಿದ್ದಾರೆ. ಈ ಮಧ್ಯೆ ರಶ್ಮಿಕಾ ಬಾಲಿವುಡ್ ನಲ್ಲಿ ಭದ್ರವಾಗಿ ನೆಲೆಯೂರುತ್ತಾರಾ ಎಂಬ ಪ್ರಶ್ನೆ ಕೂಡ ಎದುರಾಗಿದೆ. ಹೌದು. ನಟಿ ರಶ್ಮಿಕಾ ಮಂದಣ್ಣ ಬ್ಯಾಕ್ ಟು ಬ್ಯಾಕ್ ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗ್ಲೆ ನಟಿಸಿರೋ ಸಿನಿಮಾಗಳು ಬಿಡುಗಡೆಗೂ ಮುನ್ನವೇ ರಶ್ಮಿಕಾ ಹೊಸ ಹೊಸ ಪ್ರಾಜೆಕ್ಟ್ ಗಳಿಗೆ ಸಹಿ ಮಾಡುತ್ತಿದ್ದಾರೆ. ಪುಷ್ಪ ಸಿನಿಮಾದ […]Read More

ಬಾಲಿವುಡ್ ಗೆ ಎಂಟ್ರಿಕೊಟ್ಟ ನಟಿ ಶಾನ್ವಿ ಶ್ರೀವಾಸ್ತವ್

2014ರಲ್ಲಿ ತೆರೆಕಂಡ ಚಂದ್ರಲೇಖಾ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಶಾನ್ವಿ ಶ್ರೀವಾಸ್ತವ್ ಬಳಿಕ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡರು. ಸದ್ಯ ಶಾನ್ವಿ ನಟನೆಯ ಎರಡು ಸಿನಿಮಾಗಳು ಬಿಡುಗಡೆಗೆ ಸಿದ್ದವಾಗಿದ್ದು ಈ ಮಧ್ಯೆ ಶಾನ್ವಿ ಬಾಲಿವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ಯಶ್ ಜೊತೆ ಮಾಸ್ಟರ್ ಪೀಸ್ ಸಿನಿಮಾದಲ್ಲಿ ನಟಿಸಿ ಮೋಡಿ ಮಾಡಿದ್ದ ಶಾನ್ವಿ ಇದೀಗ ಹಿಂದಿ ಆಲ್ಬಂ ಸಾಂಗ್ ಮೂಲಕ ಬಿಟೌನ್ ಗೆ ಲಗ್ಗೆ ಇಟ್ಟಿದ್ದಾರೆ. ಈಗಾಗ್ಲೆ ಕನ್ನಡ, ತೆಲುಗು ಹಾಗೂ […]Read More

ನಟ ಕಮಾಲ್ ಆರ್ ಖಾನ್ ಗೆ ಎದೆನೋವು: ಬಂಧನದ ಬಳಿಕ ಹೆಚ್ಚಿತು ಮತ್ತಷ್ಟು

ಒಂದಲ್ಲ ಒಂದು ವಿವಾದಗಳಿಂದಲೇ ಬಿಟೌನ್ ನಲ್ಲಿ ಕುಖ್ಯಾತಿ ಘಳಿಸಿರುವ ನಟ ಕಂ ಸ್ವಯಂ ವಿಮರ್ಶಕ ಕಮಾಲ್ ಆರ್ ಖಾನ್ ಸದ್ಯ ಪೊಲೀಸರ ಬಂಧನದಲ್ಲಿದ್ದಾರೆ. ಸೆಲೆಬ್ರಿಟಿಗಳು ಹಾಗೂ ಮಹಿಳೆಯರ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಕಾರಣಕ್ಕೆ ಮುಂಬೈ ಪೊಲೀಸರು ಕಮಾಲ್ ಖಾನ್ ರನ್ನು ಬಂಧಿಸಿದ್ದಾರೆ. ದುಬೈಗೆ ತೆರಳಿದ್ದ ಕಮಾಲ್ ಖಾನ್ ರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಮಧ್ಯೆ  […]Read More

ಬಾಲಿವುಡ್ ನ ಖ್ಯಾತ ನಿರ್ದೇಶಕ, ನಿರ್ಮಾಪಕ ಸಾವನ್ ಕುಮಾರ್ ನಿಧನ

ಬಾಲಿವುಡ್ ನ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಸಾವನ್ ಕುಮಾರ್ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಕಳೆದ ದಿನ ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಸಾವನ್ ಕುಮಾರ್ ರನ್ನು ಮುಂಬೈನ ಕೋಕಿಲಾಬೆನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬುಧವಾರ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಚಿಕಿತ್ಸೆ ಫಲಕಾರಿ ಆಗದೆ ಗುರುರಾವ ಸಂಜೆ ಕೊನೆಯುಸಿರೆಳೆದಿದ್ದಾರೆ. ಸಾವನ್ ನಿಧನದ ಕುರಿತು ಸೋದರಳಿಗೆ ನವೀನ್ ತಿಳಿಸಿದ್ದು, ‘ಸಾವನ್ ಇಂದು ಸಂಜೆ ನಿಧನ ಹೊಂದಿದ್ದಾರೆ. ಅವರ ಹೃದಯ ಕೆಲಸ […]Read More

ಅತ್ಯಾಚಾರ ಆರೋಪ: FIR ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಬಾಲಿವುಡ್ ನಟ

ಎರಡು ಅತ್ಯಾಚಾರ ಆರೋಪಗಳನ್ನು ಎದುರಿಸುತ್ತಿರುವ ಬಾಲಿವುಡ್ ನಟ ಆದಿತ್ಯ ಪಂಚೋಲಿ ತಮ್ಮ ವಿರುದ್ಧ ಮಾಡಲಾಗಿರುವ ಆರೋಪ ಕೈ ಬಿಡಬೇಕೆಂದು ಕೋರ್ಟ್ ಮೊರೆ ಹೋಗಿದ್ದಾರೆ. 2019ರಲ್ಲಿ ಆದಿತ್ಯ ಪಂಚೋಲಿ ಮೇಲೆ ನಟಿ ಕಂಗನಾ ರನೌತ್ ಅತ್ಯಾಚಾರ ಆರೋಪ ಮಾಡಿದ್ದರು. ಅತ್ಯಾಚಾರ, ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದ ಆರೋಪವನ್ನು ಪಂಚೋಲಿ ಮೇಲೆ ಹೊರಿಸಿದ್ದು ಈ ಕುರಿತು ಎಫ್ ಐ ಆರ್ ಕೂಡ ದಾಖಲಾಗಿತ್ತು. ಆದರೆ ಈವರೆಗೆ ಆದಿತ್ಯ ಪಂಚೋಲಿ ವಿರುದ್ಧ ಯಾವುದೇ ಚಾರ್ಜ್‌ಶೀಟ್ ಅನ್ನಾಗಲಿ, ಕ್ಲೋಸರ್ ರಿಪೋರ್ಟ್ ಅನ್ನಾಗಲಿ […]Read More

ತಂದೆಯ ಆರೋಗ್ಯ ಸ್ಥಿರವಾಗಿದೆ, ವದಂತಿ ಹಬ್ಬಿಸಬೇಡಿ: ನಟ ರಾಜು ಶ್ರೀವಾತ್ಸವ್ ಪುತ್ರಿ ಅಂತರ

ನವದೆಹಲಿ: ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಹೃದಯಾಘಾತಕೊಳಗಾಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ಖ್ಯಾತ ಹಾಸ್ಯ ಕಲಾವಿದ ರಾಜು ಶ್ರೀವಾಸ್ತವ್ ಸ್ಥಿತಿ ಗಂಭೀರವಾಗಿದೆ. ರಾಜು ಶ್ರೀವಾಸ್ತವ್ ಯಾವುದೇ ಚಿಕಿತ್ಸೆಗೂ ಸ್ಪಂದಿಸುತ್ತಿಲ್ಲ,  ಈಗಾಗಲೇ ಕೋಮಗೆ ತೆರಳಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ರಾಜು ಆರೋಗ್ಯದ ಕುರಿತು ರಾಜು ಪುತ್ರಿ ಅಂತರಾ ಶ್ರೀವಾಸ್ತವ್ ಸ್ಪಷ್ಟನೆ ನೀಡಿದ್ದಾರೆ. ತಂದೆಯ ಆರೋಗ್ಯ ಸ್ಥಿರವಾಗಿದೆ. ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ತಂದೆಯ ಆರೋಗ್ಯದ ಕುರಿತು ಯಾವುದೇ ರೀತಿಯ […]Read More

Phone icon
Call Now
Reach us!
WhatsApp icon
Chat Now