• June 2, 2026

Tags : director

ಕಾಂತಾರ ಚಿತ್ರ ಹಾಸ್ಯಾಸ್ಪದವಾಗಿದೆ ಎಂದ ನಿರ್ದೇಶಕ ಅಭಿರೂಪ್ ಬಸು: ಕೊಳಕು ಮನಸ್ಥಿತಿಯಿಂದ ಆಚೆ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರವನ್ನು ಇಡೀ ಜಗತ್ತೇ ಹಾಡಿ ಹೊಗಳುತ್ತಿದೆ. ಚಿತ್ರ ನೋಡಿದ ಸೂಪರ್ ಸ್ಟಾರ್ ರಜನಿಕಾಂತ್ ರಿಷಬ್ ರನ್ನು ಮನೆಗೆ ಕರೆಸಿ ಸನ್ಮಾನಿಸಿದ್ದಾರೆ. ಇಡೀ ದೇಶವೇ ಕೊಂಡಾಡುತ್ತಿರುವ ಕಾಂತಾರ ಚಿತ್ರವನ್ನು ಬಂಗಾಲಿ ಚಿತ್ರ ನಿರ್ದೇಶಕ ಅಭಿರೂಪ್ ಬಸು ಟೀಕೆ ಮಾಡಿದ್ದಾರೆ. ಕಾಂತಾರ ಹಾಸ್ಯಾಸ್ಪದ ಸಿನಿಮಾವಾಗಿದ್ದು, ಅತ್ಯಂತ ಕಳಪೆ ರೀತಿಯ ಕಥೆಯನ್ನು ಹೊಂದಿದೆ. ಅಲ್ಲದೇ ಅಪ್ರಮಾಣಿಕವಾಗಿ ಕಥೆಯನ್ನು ಹೆಣೆಯಲಾಗಿದೆ ಎಂದೂ ಅಭಿರೂಪ್ ಬಸು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಜಗತ್ತಿನ ಜನರು ಬುದ್ದಿವಂತರು. ಅವರ ಬುದ್ದಿವಂತಿಕೆಯನ್ನೇ […]Read More

ಕನ್ನಡ ಕಿರುತೆರೆ ಧಾರವಾಹಿ ನಿರ್ದೇಶಕ ಸಯ್ಯದ್ ಅಶ್ರಫ್ ನಿಧನ

ಕನ್ನಡ ಕಿರುತೆರೆಯ ಖ್ಯಾತ ನಟ ಕಂ ನಿರ್ದೇಶಕ ಸಯ್ಯದ್ ಅಶ್ರಫ್ ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡ ಕಿರುತೆರೆಯಲ್ಲಿ ಭಕ್ತಿ ಪ್ರಧಾನ ಹಾಗೂ ಪ್ಯಾಂಟಿಸಿ ಧಾರಾವಾಹಿಗಳನ್ನು ನಿರ್ದೇಶನ ಮಾಡಿ ಖ್ಯಾತಿ ಘಳಿಸಿದ್ದ ಸಯ್ಯದ್ ಅಶ್ರಫ್ ಕೇವಲ 42 ವರ್ಷಕ್ಕೆಲ್ಲ ನಿಧನರಾಗಿರೋದು ಧಾರವಾಹಿ ಲೋಕಕ್ಕೆ ತೀವ್ರ ದುಃಖಕರವಾಗಿದೆ. ಅಮ್ಮ ನಾಗಮ್ಮ, ನಾಗಮಣಿ, ಪಾಂಡುರಂಗ, ಚಕ್ರವಾಕ, ತಕಧಿಮಿತಾ, ಅಳುಗುಳಿಮನೆ ಸೇರಿದಂತೆ ಸಾವಿರಾರು ಕಂತುಗಳಲ್ಲಿ ಪ್ರಸಾರವಾಗಿರುವ ಧಾರಾವಾಹಿಗಳಿಗೆ ಸಯ್ಯದ್ ಅಶ್ರಫ್ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಅದರಲ್ಲೂ ಬಿ.ಸುರೇಶ ಅವರ ಸಾರಥ್ಯದಲ್ಲಿ […]Read More

ಅಪ್ಪು ಎಲ್ಲೂ ಹೋಗಿಲ್ಲ, ನಮ್ಮ ಜೊತೆಗೆ ಇದ್ದಾರೆ: ನಿರ್ದೇಶಕ ಚೇತನ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ. ಇಂದು ಅದೆಷ್ಟೋ ಮಂದಿ ಅಪ್ಪು ಇಂದ ಜೀವನ ರೂಪಿಸಿಕೊಂಡಿದ್ದಾರೆ. ಸದ್ಯ ಪುನೀತ್ ರಾಜ್ ಕುಮಾರ್ ರಿಂದ ನಾನು ಇಂದು ನಿರ್ದೇಶಕನಾಗಿದ್ದೇನೆ ಎಂದು ಚಂದನವನದ ಸ್ಟಾರ್ ಡೈರೆಕ್ಟರ್ ಚೇತನ್ ಕುಮಾರ್ ಹೇಳಿದ್ದಾರೆ. ಅಪ್ಪು ನಿಧನಹೊಂದಿ ಇಂದಿಗೆ ಒಂದು ವರ್ಷ ಕಳೆದಿದೆ. ಈ ವೇಳೆ ಪುನೀತ್ ಬಗ್ಗೆ ಮಾತನಾಡಿದ ಚೇತನ್ ಕುಮಾರ್, ಪುನೀತ್ ಸರ್ ಇಲ್ಲ ಅನ್ನೋದನ್ನ ಇನ್ನೂ ನಂಬೋಕೆ ಆಗುತ್ತಿಲ್ಲ. ನಾನು ಕೂಡ ಸಾಕಷ್ಟು ಚಿತ್ರಗಳಲ್ಲಿ […]Read More

ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಮೀ ಟೂ ಬಿರುಗಾಳಿ: ಕನ್ನಡ ಚಿತ್ರರಂಗದ ಕರಾಳತೆ

ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ಮತ್ತೆ ಮೀ ಟೂ ಆರೋಪ ಕೇಳಿ ಬಂದಿದೆ. ನಟಿ ಶೃತಿ ಹರಿಹರನ್ ಮೀ ಟೂ ಆರೋಪದ ಬಳಿಕ ಮತ್ತೊಬ್ಬ ನಟಿ ಕನ್ನಡ ಚಿತ್ರರಂಗದ ಕರಾಳತೆಯನ್ನು ಬಿಚ್ಚಿಟ್ಟಿದ್ದು ಇದೇ ಕಾರಣಕ್ಕೆ ತಾವು ಸಿನಿಮಾ ಇಂಡಸ್ಟ್ರಿಯನ್ನು ತೊರೆದಿದ್ದಾಗಿ ಹೇಳಿದ್ದಾರೆ. ಸಾಕಷ್ಟು ವರ್ಷಗಳ ಬಳಿಕ ಕ್ಯಾಮೆರಾ ಮುಂದೆ ಬಂದಿರುವ ಬಾಬಾ ಬಾರೋ ರಸಿಕ ಖ್ಯಾತಿಯ ನಟಿ ಆಶಿತಾ ಇದೀಗ ಮೀ ಟೂ ಆರೋಪ ಮಾಡಿದ್ದಾರೆ. ಯುಟ್ಯೂಬ್ ಚಾನಲ್ ಒಂದರಲ್ಲಿ ಮಾತನಾಡಿದ ಆಶಿತಾ ತಮಗೆ ಕನ್ನಡ ಚಿತ್ರರಂಗದಲ್ಲಿ […]Read More

ನಿರ್ದೇಶಕನಾಗಿ ಭಡ್ತಿ ಪಡೆದ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್

ಸ್ಯಾಂಡಲ್ ವುಡ್ ಸಿನಿಮಾ ರಂಗದಲ್ಲಿ ಟಾಕಿಂಗ್ ಸ್ಟಾರ್ ಎಂದೇ ಖ್ಯಾತಿ ಘಳಿಸಿರುವ ನಟ, ನಿರ್ಮಾಪಕ ಹಾಗೂ ನಿರೂಪಕ ಸೃಜನ್ ಲೋಕೇಶ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಚಿತ್ರರಂಗದ ಅನೇಕ ವಿಭಾಗಗಳಲ್ಲಿ ಕೆಲಸ ಮಾಡಿರುವ ಸೃಜನ್ ಲೋಕೇಶ್ ಇದೀಗ ನಿರ್ದೇಶಕರಾಗಿ ಭಡ್ತಿ ಪಡೆದಿದ್ದಾರೆ. ಸೃಜಲ್ ಲೋಕೇಶ್ ಗೆ ಸಾಕಷ್ಟು ಸಿನಿಮಾಗಳ ಆಫರ್ ಗಳು ಬರುತ್ತಿವೆ. ಆದ್ರೆ ಅವುಗಳನ್ನು ಅಳೆದು ತೂಗಿ ಒಪ್ಪಿಕೊಳ್ಳುತ್ತಿದ್ದಾರೆ. ಸದ್ಯ ಸೃಜನ್ ಅಣಜಿ ನಾಗರಾಜ್ ನಿರ್ಮಾಣದ ಮುಂದಿನ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ. ನಿರ್ದೇಶಕನಾಗಬೇಕು ಎನ್ನುವುದು ಸೃಜನ್ […]Read More

ಸಲಿಂಗ ವಿವಾಹ ಬೆಂಬಲಿಸಿದ ತಮಿಳಿನ ಖ್ಯಾತ ನಿರ್ದೇಶಕ ವೆಟ್ರಿಮಾರನ್

ವಿಶ್ವ ಲೈಂಗಿಕ ಆರೋಗ್ಯ ದಿನದ ಹಿನ್ನೆಲೆಯಲ್ಲಿ ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಸಲಿಂಗ ವಿವಾಹ ಬೆಂಬಲಿಸಿ ಮಾತನಾಡಿದ್ದು ಸದ್ಯ ಈ ವೀಡಿಯೋ ವೈರಲ್ ಆಗಿದೆ. ಮಾನವ ಸರಪಳಿ ರಚನೆ ಒಳಗೊಂಡ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿಶ್ವ ಲೈಂಗಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿಮಾತನಾಡಿದ ವೆಟ್ರಿಮಾರನ್, ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸಲಿಂಗ ವಿವಾಹವನ್ನು ಉಲ್ಲೇಖಿಸಿದರು. ಬಾಂಗ್ಲಾದೇಶದ ಮಹಿಳೆ ಮತ್ತು ತಮಿಳುನಾಡಿನ ಮಹಿಳೆಯ ನಡುವೆ ನಡೆದ ಮದುವೆ ಪ್ರಸ್ತಾಪಿಸಿ ಇಂಥ ವಿವಾಹಗಳನ್ನು ಪ್ರೋತ್ಸಾಹಿಸಬೇಕು ಎಂದರು. ತಮಿಳುನಾಡಿನ ಸುಭಿಕ್ಷಾ ಸುಬ್ರಮಣಿ […]Read More

ಬಾಲಿವುಡ್ ನ ಖ್ಯಾತ ನಿರ್ದೇಶಕ, ನಿರ್ಮಾಪಕ ಸಾವನ್ ಕುಮಾರ್ ನಿಧನ

ಬಾಲಿವುಡ್ ನ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಸಾವನ್ ಕುಮಾರ್ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಕಳೆದ ದಿನ ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಸಾವನ್ ಕುಮಾರ್ ರನ್ನು ಮುಂಬೈನ ಕೋಕಿಲಾಬೆನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬುಧವಾರ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಚಿಕಿತ್ಸೆ ಫಲಕಾರಿ ಆಗದೆ ಗುರುರಾವ ಸಂಜೆ ಕೊನೆಯುಸಿರೆಳೆದಿದ್ದಾರೆ. ಸಾವನ್ ನಿಧನದ ಕುರಿತು ಸೋದರಳಿಗೆ ನವೀನ್ ತಿಳಿಸಿದ್ದು, ‘ಸಾವನ್ ಇಂದು ಸಂಜೆ ನಿಧನ ಹೊಂದಿದ್ದಾರೆ. ಅವರ ಹೃದಯ ಕೆಲಸ […]Read More

ತಂದೆಯ ಹುಟ್ಟುಹಬ್ಬದ ಪ್ರಯುಕ್ತ ಕಣ್ಣಿನ ಆಸ್ಪತ್ರೆಗೆ 50 ಲಕ್ಷ ರೂ ನೀಡಿದ ನಿರ್ದೇಶಕ

‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ ದೇಶ ವಿದೇಶದಲ್ಲೂ ಸದ್ದು ಮಾಡ್ತಿದ್ದಾರೆ. ಸದ್ಯ ಪ್ರಶಾಂತ್ ನೀಲ್ ನಿರ್ದೇಶನದ ಮೊದಲ ತೆಲುಗು ಸಿನಿಮಾ ಸಲಾರ್ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದು ಇದೀಗ ಮತ್ತೊಂದು ಉತ್ತಮ ಕೆಲಸವನ್ನು ಪ್ರಶಾಂತ್ ನೀಲ್ ಮಾಡಿದ್ದಾರೆ. ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಈ ಮಧ್ಯೆ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಪ್ರಶಾಂತ್ ನೀಲ್ ತಮ್ಮ ತಂದೆಯ ಹೆಸರಿನಲ್ಲಿ ಒಂದೊಳ್ಳೆ ಕೆಲಸ ಮಾಡಿದ್ದಾರೆ. […]Read More

ಸಲ್ಮಾನ್ ಖಾನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುದೀಪ್

ನಿರ್ದೇಶಕನಾಗ್ಬೇಕು ಎಂದುಕೊಂಡು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಕಿಚ್ಚ ಸುದೀಪ್ ಆ ಬಳಿಕ ಹಿರೋ ಆಗಿ ಮಿಂಚಿದ್ದರು. ಹಿರೋ ಆಗಿ ಸ್ಯಾಂಡಲ್ ವುಡ್ ನಲ್ಲಿ ಸಕ್ಸಸ್ ಆದ ಸುದೀಪ್ ಆ ಬಳಿಕ ನಿರ್ದೇಶಕನಾಗಿಯೂ ಸೈ ಎನಿಸಿಕೊಂಡರು. ಇದೀಗ ಸುದೀಪ್ ಮತ್ತೆ ಯಾವಾಗ ನಿರ್ದೇಶನಕ್ಕೆ ಇಳಿಯುತ್ತಾರೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿದ್ದು ಇದೀಗ ಅದಕ್ಕೆ ಸುದೀಪ್ ಉತ್ತರ ನೀಡಿದ್ದಾರೆ. ನಟ ಕಿಚ್ಚ ಸುದೀಪ್ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯಲ್ಲಿಯೂ ಉತ್ತಮ ಸಂಬಂಧ ಹೊಂದಿದ್ದಾರೆ. ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಸುದೀಪ್ ರ […]Read More

ವಿಕ್ರಾಂತ್ ರೋಣ ಬಳಿಕ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟ ಸುದೀಪ್

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲು ಸಿದ್ದವಾಗಿರೋ ವಿಕ್ರಾಂತ್ ರೋಣ ಸಿನಿಮಾದ ಬಳಿಕ ಸುದೀಪ್ ನಟನೆಯ ಮುಂದಿನ ಸಿನಿಮಾ ಯಾವುದು ಅನ್ನೋ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಇದೀಗ ಸ್ವತಃ ಸುದೀಪ್ ಈ ಬಗ್ಗೆ ಸಂದರ್ಶನವೊಂದಲ್ಲಿ ಮಾತನಾಡಿದ್ದಾರೆ. ಸುದೀಪ್ ನಟನೆಯ ಸಿನಿಮಾವೊಂದು ಬಿಡುಗಡೆಗೆ ರೆಡಿಯಾಗಿದೆ ಅನ್ನೋವಾಗ್ಲೆ ಮತ್ತೊಂದು ಸಿನಿಮಾದ ಕುರಿತು ಚರ್ಚೆ ಶುರುವಾಗಿತ್ತು. ಸದ್ಯ ವಿಕ್ರಾಂತ್ ರೋಣ ಬಿಡುಗಡೆ ಆದ ಬಳಿಕ ಇಂಡಿಯನ್ ಫಿಲ್ಮ್ಂ ಮೇಕರ್ ವೆಂಕಟ್ […]Read More

Phone icon
Call Now
Reach us!
WhatsApp icon
Chat Now