ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮೂರು ದಿನಗಳ ಕಾಲ ತಿಮ್ಮಪ್ಪನ ದರ್ಶನ ಭಾಗ್ಯವಿಲ್ಲ
ಅಕ್ಟೋಬರ್ 24ರಿಂದ 25 ಹಾಗೂ ನವೆಂರ್ 8ರಂದು ತಿಮ್ಮಪ್ಪನ ದರ್ಶನ ಇರುವುದಿಲ್ಲ. ಅಕ್ಟೋಬರ್ 24ರಂದು ದೀಪಾವಳಿ, ಅಕ್ಟೋಬರ್ 25ರಂದು ಸೂರ್ಯಗ್ರಹಣ ಮತ್ತು ನವೆಂಬರ್ 8ರಂದು ಚಂದ್ರಗ್ರಹಣದಿಂದಾಗಿ ಮೂರು ದಿನಗಳ ಕಾಲ ಭಕ್ತರಿಗೆ ಶ್ರೀವೆಂಕಟೇಶ್ವರ ಸ್ವಾಮಿ ದರ್ಶನ ಇರುವುದಿಲ್ಲ ಎಂದು ತಿರುಮಲ ತಿರುಪತಿ ದೇವಸ್ಥಾನ ಪ್ರಕಟಣೆಯಲ್ಲಿ ತಿಳಿಸಿದೆ.
ಸೂರ್ಯಗ್ರಹಣ ಹಾಗೂ ಚಂದ್ರಗ್ರಹಣದ ದಿನದಂದು ದೇವಸ್ಥಾನದ ಬಾಗಿಲುಗಳನ್ನು ಬೆಳಗ್ಗೆ 8.00 ರಿಂದ ಸಂಜೆ 7.30ರ ವರೆಗೆ ಸುಮಾರು 12 ಗಂಟೆಗಳ ಕಾಲ ಮುಚ್ಚಲಾಗುತ್ತದೆ. ಹಾಗೆಯೇ ದೀಪಾವಳಿ ದಿನವೂ ದೇವರ ದರ್ಶನವನ್ನು ರದ್ದುಗೊಳಿಸಿದ್ದರಿಂದ ಅಕ್ಟೋಬರ್ 23ರಂದು ಯಾವುದೇ ಶಿಫಾರಸು ಪತ್ರಗಳನ್ನೂ ಸ್ವೀಕರಿಸಲಾಗುವುದಿಲ್ಲ ಎಂದು ಟಿಟಿಡಿ ತಿಳಿಸಿದೆ.
