• January 2, 2026

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಲಿದ್ದಾರೆ ಆ ಇಬ್ಬರು ಸ್ಟಾರ್ಸ್: ಸಿಎಂ ಸ್ಪಷ್ಟನೆ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಕೆಲ ಸ್ಟಾರ್ ನಟರು ಆಗಮಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಕಾರ್ಯಕ್ರಮಕ್ಕೆ ದಕ್ಷಿಣದ ಇಬ್ಬರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಇದರಲ್ಲಿ ಒಬ್ಬ ನಟರು ಈಗಾಗಲೇ ಒಪ್ಪಿಕೊಂಡಿದ್ದು, ಮತ್ತೋರ್ವ ನಟರು ಇನ್ನೂ ಉತ್ತರಿಸಬೇಕಿದೆ ಎಂದಿದ್ದಾರೆ. ಕಾರ್ಯಕ್ರಮಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗಿನ ಖ್ಯಾತ ನಟ ಜೂ.ಎನ್ ಟಿ ಆರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಈಗಾಗಲೇ ಜೂನಿಯರ್ ಎನ್ ಟಿ ಆರ್ ಕಾರ್ಯಕ್ರಮಕ್ಕೆ ಆಗಮಿಸಲು ಗ್ರೀನ್ ಸಿಗ್ನಲ್ ನೀಡಿದ್ದು, ರಜನಿಕಾಂತ್ ಅವರ ಒಪ್ಪಿಗೆ ಪತ್ರ ಇನ್ನಷ್ಟೇ ಸಿಗಬೇಕಿದೆ ಎಂದು ಸಿಎಂ ತಿಳಿಸಿದ್ದಾರೆ. ರಜನಿಕಾಂತ್ ಗೂ ಬೆಂಗಳೂರಿಗೆ ಉತ್ತಮ ನಂಟಿದೆ. ತಮಿಳು ಚಿತ್ರರಂಗದಲ್ಲಿ ಖ್ಯಾತಿ ಘಳಿಸಿದ್ದರು ರಜನಿಕಾಂತ್ ಹುಟ್ಟಿ ಬೆಳೆದಿದೆಲ್ಲ ಬೆಂಗಳೂರಿನಲ್ಲಿ. ಅಲ್ಲದೆ ಡಾ.ರಾಜ್ ಕುಮಾರ್ ಫ್ಯಾಮಿಲಿ ಜೊತೆ ರಜನಿಕಾಂತ್ ಅವರಿಗೆ ಉತ್ತಮ ಬಾಂದವ್ಯವಿದೆ. ಇನ್ನೂ ನಟ ಜೂನಿಯರ್ ಎನ್ ಟಿ ಆರ್ ತಾಯಿ ಕರ್ನಾಟಕದವರು. ಜೊತೆಗೆ ಜೂನಿಯರ್ ಎನ್ ಟಿ ಆರ್ ಕೂಡ ರಾಜ್ ಕುಮಾರ್ ಕುಟುಂದೊಂದಿಗೆ ಉತ್ತಮ ಬಾಂದವ್ಯ ಹೊಂದಿದ್ದರು. ಪುನೀತ್ ರನ್ನು ಸಹೋದರ ಸಮನರಾಗಿ ಕಾಣುತ್ತಿದ್ದರು. ಹಾಗಾಗಿ ಇಬ್ಬರಿಗೂ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಲಾಗಿದೆ. ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗಿದ್ದು, ಇಂಥದ್ದೊಂದು ಗೌರವಕ್ಕೆ ಈ ಮೊದಲು ಡಾ.ರಾಜ್ ಕುಮಾರ್ ಕೂಡ ಪಾತ್ರರಾಗಿದ್ದಾರೆ. ನವೆಂಬರ್ 1 ರಂದು ವಿಧಾನಸೌಧದ ಮುಂಭಾಗದಲ್ಲಿ ಆಯೋಜನೆ ಮಾಡಿದ್ದು, ಡಾ.ರಾಜ್ ಕುಟುಂಬ ಹಾಗೂ ಅಭಿಮಾನಿಗಳು ಸಾಕ್ಷಿಯಾಗಲಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now