ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸಚಿವ ಕತ್ತಿ ನಿಧನಕ್ಕೆ 1 ದಿನ ಶೋಕಾಚರಣೆ: ಅಸಮಾಧಾನ ಹೊರ ಹಾಕಿದ ಸಿದ್ದರಾಮಯ್ಯ
ಸಾಮಾನ್ಯವಾಗಿ ಗಣ್ಯರ ನಿಧನ ವೇಳೆ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸುತ್ತದೆ. ಈ ಹಿಂದೆ ಎಚ್ ಎಸ್ ಮಹಾದೇವ ಪ್ರಸಾದ್, ಅಂಬರೀಷ್, ಗಿರೀಶ್ ಕಾರ್ನಾಡ್, ಸಿದ್ದಗಂಗಾಶ್ರೀ, ಪೇಜಾವರ ಶ್ರೀ ನಿಧನರಾದ ಸಂದರ್ಭದಲ್ಲಿ ಮೂರು ದಿನ ಶೋಕಾಚರಣೆಯನ್ನು ಸರ್ಕಾರ ಘೋಷಿಸಿತ್ತು. ಆದರೆ ಉಮೇಶ್ ಕತ್ತಿ ನಿಧನದ ಶೋಕಾಚರಣೆಯನ್ನು ಒಂದೇ ದಿನ ಘೋಷಿಸಿರುವ ಕತ್ತಿ ಅಭಿಮಾನಿಗಳಿಗೆ ಬೇಸರ ತರಿಸಿದೆ.
ಇಂದು 12ಗಂಟೆಗೆ ಸ್ವಗ್ರಾಮ ಬೆಲ್ಲದ ಬಾಗೇವಾಡಿ ಗ್ರಾಮಕ್ಕೆ ಮೃತದೇಹ ಶಿಪ್ಟ್ ಮಾಡಲಾಗುತ್ತೆ. 12ರಿಂದ ಸಂಜೆ ಐದು ಗಂಟೆ ವರೆಗೂ ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ. ಐದು ಗಂಟೆಗೆ ಉಮೇಶ್ ಕತ್ತಿಯವರ ಜಮೀನಿನಲ್ಲಿ ತಂದೆ ತಾಯಿಯ ಸಮಾಧಿ ಪಕ್ಕದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
