ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
‘ವರಾಹ ರೂಪಂ’ ಹಾಡು ಕದ್ದಿಲ್ಲ: ಧರ್ಮಸ್ಥಳದಲ್ಲಿ ಹೇಳಿದ ರಿಷಬ್ ಶೆಟ್ಟಿ
ಕಾಂತಾರ ಸಿನಿಮಾದ ಕೊನೆಯಲ್ಲಿ ಬರುವ ಕಾಂತಾರ ಚಿತ್ರ ಕೂಡ ಚಿತ್ರದ ಯಶಸ್ಸಿಗೆ ಒಂದು ಕಾರಣವಾಗಿತ್ತು. ಆದರೆ ಈ ಹಾಡಿನ ಟ್ಯೂನ್ ಕದ್ದ ಆರೋಪ ಕೇಳಿ ಬಂದಿತ್ತು. ಇತ್ತೀಚೆಗಷ್ಟೇ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್ ನ ಸದಸ್ಯರು ಕೋರ್ಟಿಗೆ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ಈ ಹಾಡು ಬಳಸದಂತೆ ತಡೆಯಾಜ್ಞೆ ನೀಡಿತ್ತು.
ಆದರೂ ಚಿತ್ರದಲ್ಲಿ ಹಾಡನ್ನು ಮುಂದುವರೆಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ರಿಷಬ್ ಶೆಟ್ಟಿ, ಯಾವುದೇ ಕಾರಣಕ್ಕೂ ಅದು ಕದ್ದ ಮ್ಯೂಸಿಕ್ ಅಲ್ಲ ಎಂದಿದ್ದಾರೆ. ಈ ಹಿಂದೆಯೂ ರಿಷಬ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಇದೇ ಮಾತನ್ನು ಹೇಳಿದ್ದರು. ಅಲ್ಲದೆ ಇದೇ ಕಾರಣಕ್ಕೆ ಚಿತ್ರದಲ್ಲಿ ಆ ಹಾಡು ಇರತ್ತೆ ಎಂದು ಈವರೆಗೂ ಥಿಯೇಟರ್ ನಲ್ಲಿ ಅದನ್ನು ಮುಂದುವರೆಸಿಕೊಂಡು ಬಂದಿದೆ. ಆದರೆ ಇದೀಗ ಮತ್ತೊಂದು ಕೇಸ್ ದಾಖಲಾಗಿದ್ದು, ಮಾತೃಭೂಮಿ ಮ್ಯೂಸಿಕ್ ಸಂಸ್ಥೆಯು ಮತ್ತೆ ಕೋರ್ಟ್ ಮೊರೆ ಹೋಗಿದೆ. ಹಾಗಾಗಿ ಅರ್ಜಿಯ ವಿಚಾರಣೆ ನಡೆಸಿರುವ ಪಾಲಕ್ಕಾಡ್ ಕೋರ್ಟ್ ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ.
