ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡದ ಹಿರಿಯ ನಟ ಉಮೇಶ್ ಸಿನಿ ಪಯಣಕ್ಕೆ 62ರ ಸಂಭ್ರಮ: ವಾಣಿಜ್ಯ ಮಂಡಳಿಯಿಂದ ಅಭಿನಂದನಾ ಕಾರ್ಯಕ್ರಮ
ಉಮೇಶ್ ಮಾತನಾಡಿ, ಇದು ನನ್ನ ಸುದಿನ ಅಂತ ಭಾವಿಸ್ತೀನಿ. ಚಿತ್ರರಂಗ ನನ್ನನ್ನ ಮನೆ ಮಗನಂತೆ ನೋಡಿದೆ. ಅಭಿಮಾನಿ ಅನ್ನದಾತರಿಂದ ಇಲ್ಲಿದ್ದೇನೆ. ಕಲಾಸೇವೆ ಮಾಡೋ ಅವಕಾಶ ಸಿಕ್ಕಿದ್ದು ಪುಣ್ಯ. ಕನ್ನಡ ಚಿತ್ರರಂಗದ ನಿರ್ಮಾಪಕರು, ನಿರ್ದೇಶಕರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು. ಭಾ.ಮಾ.ಹರೀಶ್ ಮಾತನಾಡಿ, ಹಿರಿಯ ಕಲಾವಿದ ಉಮೇಶ್ ಅವರು ಸನ್ಮಾನ ಸ್ವೀಕರಿಸಿರುವುದು ಖುಷಿ ಕೊಟ್ಟಿದೆ. ನಿಮ್ಮ ಆಶೀರ್ವಾದ ಕನ್ನಡ ಇಂಡಸ್ಟ್ರೀ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೇಲೆ ಇರಲಿ. ಹೊಸ ನಿರ್ದೇಶಕರು, ನಿರ್ಮಾಪಕರನ್ನು ಕರೆಸಿ ಪೋಷಕ ಕಲಾವಿದರ ಸಂಘದ ಮೂಲಕ ನೆನಪಿಸಿಕೊಳ್ಳುವ ಕೆಲಸ ಮಾಡುತ್ತೇವೆ ಎಂದರು.
ಐದು ದಶಕಗಳಿಗೂ ಹೆಚ್ಚು ಕಾಲದಿಂದ ಕಲಾವಿದರಾಗಿ ಸಕ್ರಿಯರಾಗಿರುವ ಉಮೇಶ್, ‘ಗೋಲ್ ಮಾಲ್ ರಾಧಾಕೃಷ್ಣ’ ಸಿನಿಮಾದಲ್ಲಿ ಅವರ ಡೈಲಾಗ್ ಇಂದಿಗೂ ಪ್ರೇಕ್ಷಕರ ಮನಸ್ಸಿನಲ್ಲಿ ಉಳಿದುಬಿಟ್ಟಿದೆ. “ಅಯ್ಯೋ ತಪ್ಪಾಯ್ತು ಎಂಬ ಡೈಲಾಗ್ ಉಮೇಶ್ ಅವರನ್ನು ನೋಡಿದರೆ ನೆನಪಾಗುತ್ತದೆ. ವರನಟ ಡಾ.ರಾಜ್ ಕುಮಾರ್ ಜೊತೆ ‘ಶೃತಿ ಸೇರಿದಾಗ’ ಚಿತ್ರದಲ್ಲಿನ “ಇದು ಬೊಂಬೆಯಾಟವಯ್ಯಾ” ಹಾಡಿನಲ್ಲಿ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು. ಹಾಲು ಜೇನು, ಶ್ರಾವಣ ಬಂತು, ಗುರುಶಿಷ್ಯರು, ಮಲಯಮಾರುತ, ನೀನು ನಕ್ಕರೆ ಹಾಲು ಸಕ್ಕರೆ, ಚೈತ್ರದ ಪ್ರೇಮಾಂಜಲಿ ಚಿತ್ರಗಳು ಸೇರಿದಂತೆ ಹಲವು ಚಿತ್ರಗಳಲ್ಲಿ ಉಮೇಶ್ ಅಮೋಘವಾಗಿ ನಟಿಸಿದ್ದಾರೆ. ಎಲ್ಲರಂತಲ್ಲ ನನ್ನ ಗಂಡ, ಜೇನುಗೂಡು, ಚನ್ನ ಸಿನಿಮಾ ಚಿತ್ರಗಳನ್ನು ಉಮೇಶ್ ನಿರ್ದೇಶನ ಮಾಡಿದ್ದಾರೆ.
