ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಗೀತಾ ಗೋವಿಂದ ನಿರ್ದೇಶಕನ ಜೊತೆ ಮತ್ತೆ ಕೈ ಜೋಡಿಸಿದ ವಿಜಯ್ ದೇವರಕೊಂಡ
ಇತ್ತೀಚೆಗಷ್ಟೇ ವಿಜಯ್ ದೇವರಕೊಂಡ ಹಾಗೂ ಪರಶುರಾಮ್ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾ ಅನೌನ್ಸ್ ಆಗಿತ್ತು. ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಪಕ ದಿಲ್ ರಾಜು ಹಾಗೂ ಶಿರೀಶ್ ಈ ಚಿತ್ರಕ್ಕೆ ಹಣ ಹಾಕುತ್ತಿದ್ದು, ವಾಸು ವರ್ಮಾ ಕ್ರಿಯೇಟಿವ್ ಪ್ರೊಡ್ಯೂಸರ್ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಹೈದ್ರಾಬಾದ್ ನಲ್ಲಿಂದು ಅದ್ಧೂರಿಯಾಗಿ ಮುಹೂರ್ತ ನೆರವೇರಿದೆ. ನಿರ್ಮಾಪಕ ಶ್ಯಾಮ್ ಪ್ರಸಾದ್ ರೆಡ್ಡಿ ಸಿನಿಮಾಗೆ ಕ್ಲ್ಯಾಪ್ ಮಾಡಿದ್ರೆ, ಗೋವರ್ಧನ್ ರಾವ್ ದೇವರಕೊಂಡ ಮೊದಲ ಶಾಟ್ ನಿರ್ದೇಶಿಸಿದರು, ಜನಪ್ರಿಯ ಹಣಕಾಸುದಾರ ಸತ್ತಿ ರಂಗಯ್ಯ ಕ್ಯಾಮೆರಾಗೆ ಚಾಲನೆ ನೀಡಿದರು.
ಸದ್ಯ ಸಿನಿಮಾ ಪ್ರೀ ಪ್ರೊಡಕ್ಷನ್ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಚಿತ್ರೀಕರಣ ಪ್ರಾರಂಭವಾಗಲಿದೆ. ಸೀತಾರಾಮಂ ಸಿನಿಮಾ ಮೂಲಕ ಸೌತ್ ಸಿನಿಪ್ರಿಯರಿಗೆ ಪರಿಚಿತರಾಗಿರುವ ಮೃಣಾಲ್ ಠಕೂರ್ ವಿಜಯ್ ದೇವರಕೊಂಡಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ವಿಜಯ್ ದಿಲ್ ರಾಜು ಹಾಗೂ ಶಿರೀಶ್ ಜೊತೆ ಕೈ ಜೋಡಿಸ್ತಿದ್ದು, ಶ್ರೀ ವೆಂಕಟೇಶ್ವರ್ ಕ್ರಿಯೇಷನ್ ನ 54ನೇ ಸಿನಿಮಾ ಇದಾಗಿದೆ. ಅದ್ಧೂರಿ ಬಜೆಟ್ ನಲ್ಲಿ ಚಿತ್ರ ನಿರ್ಮಾಣ ಮಾಡಲಾಗ್ತಿದ್ದು, ಉಳಿದ ಪಾತ್ರವರ್ಗದ ಬಗ್ಗೆ ಆದಷ್ಟು ಬೇಗ ಚಿತ್ರತಂಡ ಮಾಹಿತಿ ನೀಡಲಿದೆ. ಕೆಯು ಮೋಹನನ್ ಛಾಯಾಗ್ರಹಣ, ಗೋಪಿಸುಂದರ್ ಸಂಗೀತ, ಎಎಸ್ ಪ್ರಕಾಶ್ ಕಲಾ ನಿರ್ದೇಶನ, ಮಾರ್ತಾಂಡ್ ಕೆ ವೆಂಕಟೇಶ್ ಸಂಕಲನ ಸಿನಿಮಾಕ್ಕಿದೆ.

