• June 19, 2026

ವೀರೇಂದ್ರ ಹೆಗ್ಗಡೆ ಭೇಟಿಯಾದ ಸುದೀಪ್ ದಂಪತಿ

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ಆಗಿ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡದ ಜೊತೆಗೆ ಪರಭಾಷಾ ಮಂದಿಯೂ ವಿಕ್ರಾಂತ್ ರೋಣನನ್ನು ಮೆಚ್ಚಿಕೊಂಡಿದ್ದು ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿದೆ. ಈ ಮಧ್ಯೆ ಸುದೀಪ್ ದಂಪತಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ವಿಕ್ರಾಂತ್ ರೋಣ ಸಕ್ಸಸ್ ಬೆನ್ನಲ್ಲೆ ದೆಹಲಿಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ. ಸುದೀಪ್ ದಂಪತಿ ಜೊತೆ ಜಾಕ್ ಮಂಜು ಕೂಡ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದು, ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನೂಪ್ ಬಂಡಾರಿ ನಿರ್ದೇಶನದ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಥಿಯೇಟರ್ ನಲ್ಲಿ ಕಮಾಲ್ ಮಾಡುತ್ತಿದೆ. ಸದ್ಯದಲ್ಲೇ ಸುದೀಪ್ ಬಿಗ್ ಬಾಸ್ ಕಾರ್ಯಕ್ರಮ ಆರಂಭವಾಗಲಿದೆ. ಆ ಬಳಿಕ ತಮಿಳಿ ಸ್ಟಾರ್ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶನದ ಸಿನಿಮಾದಲ್ಲಿ ಸುದೀಪ್ ಭಾಗಿಯಾಗಲಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now