• March 14, 2026

ಹಾವು ಕಡಿತದಿಂದ ಚಿಕಿತ್ಸೆ ಪಡೆಯುತ್ತಿದ್ದ  ಸ್ನೇಕ್ ಲೋಕೇಶ್ ಸಾವು

ಬೆಂಗಳೂರು:  ಸ್ನೇಕ್ ಲೋಕೇಶ್ ಎಂದೇ ರಾಜ್ಯಾದ್ಯಂತ ಖ್ಯಾತಿ ಘಳಿಸಿದ್ದ ಉರಗ ರಕ್ಷಕ, ನೆಲಮಂಗಲದ ಸ್ನೇಕ್ ಲೋಕೇಶ್ ಹಾವು ಕಡಿತದಿಂದ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲೋಕೇಶ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಕಳೆದ ಜುಲೈ 17ರಂದು ಸ್ನೇಕ್ ಲೋಕೇಶ್ ಅವರ ಬಲಗೈ ಬೆರಳಿಗೆ ವಿಷಪೂರಿತ ನಾಗರಹಾವು ಕಚ್ಚಿತ್ತು. ತಕ್ಷಣವೇ ಸ್ನೇಕ್ ಲೋಕೇಶ್ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಿ ಬಳಿಕ ಬೆಂಗಳೂರಿನ ಮಣಿಪಾಲ್‍ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಎಲ್ಲೆ ಹಾವುಗಳು ಇವೆ ಎಂಬ ಮಾಹಿತಿ ಸಿಕ್ಕರು ತಕ್ಷಣವೇ ಅಲ್ಲಿಗೆ ಹೋಗಿ ಅವುಗಳನ್ನು ಸ್ನೇಕ್ ಲೋಕೇಶ್ ರಕ್ಷಿಸುತ್ತಿದ್ದರು. ಇದುವರೆಗೂ 35 ಸಾವಿರಕ್ಕೂ ಅಧಿಕ ವಿವಿಧ ಜಾತಿಯ ಉರಗಗಳು, ಪ್ರಾಣಿ ಪಕ್ಷಿಗಳನ್ನು ರಕ್ಷಿಸಿದ್ದಾರೆ. ಸಂಗೀತದಲ್ಲಿ ಸಾಕಷ್ಟು ಆಸಕ್ತಿ ಹೊಂದಿದ್ದ ಸ್ನೇಕ್ ಲೋಕೇಶ್ ಕೆಲವು ಧಾರವಾಹಿ, ಹಾಗೂ ಕೆಲ ಸಿನಿಮಾಗಳಲ್ಲೂ ನಟಿಸಿದ್ದಾರೆ. ನೆಲಮಂಗಲದಲ್ಲಿ ಸಣ್ಣದೊಂದು ಹೋಟೆಲ್ ಇಟ್ಟುಕೊಂಡ ಜೀವನ ನಡೆಸುತ್ತಿದ್ದ ಸ್ನೇಕ್ ಲೋಕೇಶ್ ಹಾವು ಕಡಿತದಿಂದಲೇ ಮೃತಪಟ್ಟಿರುವುದು ವಿಪರ್ಯಾಸ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now